ಬೇಡಿಕೆ ಈಡೇರಿಸೋವರೆಗೂ ಪ‍್ರತಿಭಟನೆ ನಿಲ್ಲೋದಿಲ್ಲ: ಜಗಜೀತ್‌ ಸಿಂಗ್‌ ಡಲ್ಲೇವಾಲ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪುವವರೆಗೂ ಪ‍್ರತಿಭಟನೆಗಳು ಮುಂದುವರಿಯಲಿವೆ ಎಂದು ರೈತ ಮುಖಂಡ ಜಗಜೀತ್‌ ಸಿಂಗ್‌ ಡಲ್ಲೇವಾಲ್‌ ಹೇಳಿದ್ದಾರೆ.

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 131 ದಿನಗಳಿಂದ ನಡೆಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಡಲ್ಲೇವಾಲ್‌ ಭಾನುವಾರ ಕೊನೆಗೊಳಿಸಿದ್ದರು.

ಬಳಿಕ ಆರೋಗ್ಯ ತಪಾಸಣೆಗಾಗಿ ಪಂಜಾಬ್‌ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪುವವರೆಗೂ ಪ್ರತಿಭಟನೆಗಳು ನಡೆಯುತ್ತದೆ ಎಂದಿದ್ದಾರೆ.

ಪ್ರತಿಭಟನೆಗಳ ಭಾಗವಾಗಿ ಪಂಜಾಬ್‌ನ ವಿವಿಧೆಡೆ ಕಿಸಾನ್‌ ಪಂಚಾಯತ್‌ಗಳನ್ನೂ ಆಯೋಜಿಸಲಾಗುತ್ತದೆ. ಹೋರಾಟದ ಮುಂದಿನ ರೂಪುರೇಷೆಗಳನ್ನು ಸಂಯುಕ್ತ ಕಿಸಾನ್‌ ಮೋರ್ಚಾ, ಕಿಸಾನ್‌ ಮಜ್ದೂರ್‌ ಮೋರ್ಚಾ ಸಭೆ ನಡೆಸಿ ನಿರ್ಧರಿಸಲಿವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!