ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ ದೊಡ್ಡ ನಿರಾಳತೆ ಸಿಕ್ಕಿದೆ. ಬೆಂಗಳೂರಿನ ವಿಶೇಷ ಜನತಾ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಜುಲೈ 8ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ 351(3), ಕಲಂ 353ರ ಅಡಿಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಸೋಮವಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಭರತ್ ಶೆಟ್ಟಿ, ಸಂಸತ್ತಿನ ಒಳಗೆ ರಾಹುಲ್ ಗಾಂಧಿಗೆ ಕಪಾಳಮೋಕ್ಷ ಮಾಡಬೇಕು ಅನ್ನಿಸುತ್ತಿದೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.