ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆದ ಹಿನ್ನೆಲೆಯಲ್ಲಿ ರದ್ದು ರದ್ದುಪಡಿಸಿದ್ದ ಪಿಎಸ್ಐ ಪರೀಕ್ಷೆಯನ್ನು ಮತ್ತೆ ನಡೆಸುವುದಾಗಿ ರಾಜ್ಯ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿದ್ದು, ಈ ಹಿನ್ನೆಲೆ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಪೋಷಕರು ಸರಕಾರ ಈ ಆದೇಶವನ್ನು ಹಿಂಪಡೆಯಬೇಕು ಮತ್ತು ಅಕ್ರಮದಲ್ಲಿ ಭಾಗಿ ಆಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಪಿಎಸ್ಐ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲರಿಗೂ ಶಿಕ್ಷೆ ಖಂಡಿತವಾಗಿಯೂ ಆಗುತ್ತದೆ. ತನಿಖೆ ಆಗುವವರೆಗೂ ಕೂಡ ಪಿಎಸ್ಐ ಅಭ್ಯರ್ಥಿಗಳು ಸಮಾಧಾನವಾಗಿ ಇರಿ. ನಾವು ಈಗ ಯಾವುದೇ ಭರವಸೆ ಕೊಡಲು ಸಾಧ್ಯ ಇಲ್ಲ. ತನಿಖೆ ಮುಗಿಯೋವರೆಗೂ ಕೂಡ ಭರವಸೆ ಕೊಡಲ್ಲ. ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡುತ್ತೇನೆ ಎಂದರು.
ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.