ಹೊಸದಿಗಂತ ವರದಿ, ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರ್.ಡಿ ಪಾಟೀಲ್,ನನ್ನು ಫೆ.6 ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಕಲಬುರಗಿ ಐದನೇ ಜೆಎಂಎಫ್ಸಿ ನ್ಯಾಯಾಲಯವು ಆದೇಶಿಸಿದೆ.
ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಆರ್ ಡಿ ಪಾಟೀಲ್ ನನ್ನು ಬಂಧಿಸಲು ಬಂದ ವೇಳೆ ಸಿಐಡಿ ಅಧಿಕಾರಿಗಳನ್ನು ತಳ್ಳಿ ಪರಾರಿಯಾಗಿದ್ದನು.
ಈ ಕುರಿತು ಸಿಐಡಿ ಕಲಬುರಗಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಆರ್ ಡಿ ಪಾಟೀಲ್ ಬಂಧನಕ್ಕೆ ಜಾಲ ಬೀಸಿತ್ತು. ಇದರ ಬೆನ್ನಲೇ ಆರ್ ಡಿ ಪಾಟೀಲ್ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.