ಪಿಎಸ್ಐ ನೇಮಕಾತಿ ಅಕ್ರಮ: ಮಂಜುನಾಥ್ , ಶ್ರೀಧರ್ ಗೆ 3 ದಿನ ಸಿಐಡಿ ಕಸ್ಟಡಿಗೆ

ಹೊಸ ದಿಗಂತ ವರದಿ, ಕಲಬುರಗಿ:

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳಾದ ಇಂಜಿನಿಯರ್ ಮಂಜುನಾಥ ಮೇಳಕುಂದಿ ಹಾಗೂ ಶ್ರೀಧರ್ ಪವಾರ್ ಗೆ ಮೂರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ, ಕಲಬುರಗಿ ಮೂರನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೋಮವಾರ ಮಧ್ಯಾಹ್ನ ಇವರಿಬ್ಬರ ವೈದ್ಯಕೀಯ ತಪಾಸಣೆ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಪೋಲಿಸರು,ಹೆಚ್ಚಿನ ತನಿಖೆಗಾಗಿ ಇಬ್ಬರನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಿತ್ತು.
ಸಿಐಡಿ ಅಧಿಕಾರಿಗಳ ಮನವಿ ಪುರಸ್ಕರಿಸಿ,ಅವರಿಬ್ಬರನ್ನು ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!