ಹೊಸದಿಗಂತ ವರದಿ, ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಪೊಲೀಸ ಅಧಿಕಾರಿಗಳಿಗೆ ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಮೂರನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ.
ರಾಯಚೂರು ಜಿಲ್ಲೆಯ ಲಿಔಗಸೂಗೂರಿನ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೇತ್ರೆ ಅವರನ್ನು 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಬಂಧಿತ ಡಿವೈಎಸ್ಪಿ ಹಾಗೂ ಸಿಪಿಐ ಅವರನ್ನು ಮೂರನೇ ಜೆಎಂಎಪ್ಸಿ ನ್ಯಾಯಾಲಯದ ಮುಂದೆ ಸಿಐಡಿ ಅಧಿಕಾರಿಗಳು