ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಹೊಸದಿಗಂತ ವರದಿ, ಕಲಬುರಗಿ:

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇದರೊಂದಿಗೆ ಪಿಎಸ್ಐ ಅಕ್ರಮದಲ್ಲಿ ಬಂಧನವಾದ ಸಂಖ್ಯೆ 41ಕ್ಕೆ ಎರಿಕೆಯಾಗಿದೆ.

ಪ್ರಕರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಆಪ್ತರಾಗಿರುವ ಅಫಜಲಪುರ ತಾಲ್ಲೂಕಿನ ಕರ್ಜಗಿ ಗ್ರಾಮದ ಮಹೇಶ್ ಹಿರೋಹಳ್ಳಿ , ಸೈಫನ್ ಜಮಾದಾರ್ ಬಂಧಿತ ಆರೋಪಿಗಳಾಗಿದ್ದಾರೆ.

ಸೈಫನ್ ಜಮಾದರ್ ಸಹೋದರ, ಇಸ್ಮಾಯಿಲ್ ಖಾದರ್ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಪಾಸ್ ಆಗಿದ್ದ ಎನ್ನಲಾಗಿದೆ. ಅಕ್ರಮಕ್ಕೆ ಮಹೇಶ್ , ಸೈಫನ್ ಸೇರಿ ಹಲವರು ಸಾಥ್‌ ನೀಡಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಇಸ್ಮಾಯಿಲ್ ಖಾದರ್ ಸೇರಿ ಐದು ಜನರ ವಿರುದ್ದ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಅಕ್ರಮದಲ್ಲಿ ಭಾಗಿಯಾಗಿ ತೆಲೆ ಕರೆಸಿಕೊಂಡ ಇಸ್ಮಾಯಿಲ್ ಖಾದರ್ ಸೇರಿ ಐವರಿಗಾಗಿ ಈಗ ಸಿಐಡಿ ತಂಡ ಹುಡುಕಾಟ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!