ಪಿಎಸ್ಐ ನೇಮಕಾತಿ ಅಕ್ರಮ: ಡಿವೈಎಸ್ಪಿ ವೈಜನಾಥ ರೇವೂರ ಜಾಮೀನು ಅರ್ಜಿ ವಜಾ

ಹೊಸದಿಗಂತ ವರದಿ,ಕಲಬುರಗಿ:

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಆರೋಪಿ 29 ವೈಜನಾಥ ರೇವೂರ ಅವರ ಜಾಮೀನು ಅರ್ಜಿ ವಜಾಗೊಳಿಸಿದೆ.

ಕಲಬುರಗಿ ಮೂರನೇ ಜೆಎಮ್ಎಫ್ಸಿ ನ್ಯಾಯಾಲಯದಿಂದ ಜಾಮೀನು ಅರ್ಜಿ ವಜಾವಾಗಿದ್ದು,ನ್ಯಾಯಮೂರ್ತಿ ಶ್ರೀನಿವಾಸ್ ಕೆ.ಆರ್. ಅವರು ಜಾಮೀನು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮದ ಮಾಸ್ಟರ್ ಮೈಂಡ್ ವೈಜನಾಥ ರೇವೂರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ವೈಜನಾಥ ರೇವೂರ ಕೆ.ಎಸ್ .ಆರ್.ಪಿ 6ನೇ ಬಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಗಳಿಗೆ ಮಾಸ್ಟರ್ ಮೈಂಡ್ ಆಗಿದ್ದ ವೈಜನಾಥ, ಇದೀಗ ಸಿಐಡಿ ಕೈಗೆ ಲಾಕ್ ಆಗಿ ಕಲಬುರಗಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!