ಹೊಸದಿಗಂತ ವರದಿ, ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸರಬರಾಜು ಮಾಡಿದ ಆರೋಪದಡಿ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಕ ಶಂಕರಪ್ಪ ಬಸಪ್ಪ ಹನಮಗೊಂಡ (32) ಎಂಬಾತನನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ತುಮಕೂರು ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದು ಅಕ್ರಮದಲ್ಲಿ ಬಂಧಿತರಾದ ಅಭ್ಯರ್ಥಿಗಳಿಗೆ ಬ್ಲೂಟೂತ್ ಡಿವೈಸ್ ಪೂರೈಕೆ ಮಾಡಿ ಉತ್ತರಗಳನ್ನು ಕಲಬುರಗಿಯಿಂದಲೇ ಶಂಕರಪ್ಪಾ ಪೂರೈಸಿದ್ದನು ಎಂದು ಸಿಐಡಿ ಮೂಲಗಳು ತಿಳಿಸಿವೆ.