ಪಿಎಸ್‌ಐ ನೇಮಕಾತಿ ಹಗರಣ: ಜಾಮೀನಿನ ಮೇಲೆ ಹೊರಬಂದ ದಿವ್ಯಾಗೆ ಅದ್ಧೂರಿ ಸ್ವಾಗತ

ಹೊಸದಿಗಂತ ವರದಿ ಕಲಬುರಗಿ:

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಪ್ರಮುಖ ಆರೋಪಿಯಾದ ದಿವ್ಯಾ ಹಾಗರಗಿ ಜಾಮೀನು ಮಂಜೂರು ಆದ ಬೆನ್ನಲ್ಲೇ, ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ.

ಕಳೆದ 8 ತಿಂಗಳಿನಿಂದ ಜೈಲಿನಲ್ಲಿ ಇದ್ದ,ಆರೋಪಿ ದಿವ್ಯಾ ಹಾಗರಗಿ,ನಿನ್ನೆ ರಾತ್ರಿ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ನಂತರ ಅವರ ಮನೆಯ ಮುಂದೆ ಪಟಾಕಿ ಸಿಡಿಸಿ, ಸಂಭ್ರಮಿಸಿ,ಹಾರ ತೂರಾಯಿ ಹಾಕಿ ಸ್ವಾಗತ ಮಾಡಲಾಗಿದೆ.

ದಿವ್ಯಾ ಹಾಗರಗಿ ಮತ್ತು ಪತಿ ರಾಜೇಶ್ ಹಾಗರಗಿ ಮತ್ತು ಅಭಿಮಾನಿಗಳ ಬಳಗದಿಂದ ಅದ್ದೂರಿ ಸ್ವಾಗತ ಮಾಡಲಾಗಿದ್ದು,ಇದಕ್ಕೂ ಮೊದಲು ಜೈಲಿನಿಂದ ಬಿಡುಗಡೆಯಾದ ಬಳಿಕ ಜೈಲಿನ ಬಳಿಯೇ ಕೆಲ ಉಚ್ಛಾಟಿತ ಬಿಜೆಪಿ ನಾಯಕರಿಂದ ಸ್ವಾಗತ ಮಾಡಲಾಗಿದೆ.

ಜನೇವರಿ 5 ರಂದು ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಧೀಶ ಕೆ.ಬಿ.ಪಾಟೀಲ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದರು.ದಿವ್ಯಾ ಹಾಗರಗಿ ಸೇರಿದಂತೆ ಒಟ್ಟು 27 ಜನ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!