ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: 12 ಜನ ಆರೋಪಿಗಳ ಜಾಮೀನು ಅರ್ಜಿ ವಜಾ

ಹೊಸದಿಗಂತ ವರದಿ,ಕಲಬುರಗಿ

ಪಿಎಸ್ಐ ನೇಮಕಾತಿ ಅಕ್ರಮ ಪರೀಕ್ಷೆ ಸಂಬಂಧಿಸಿದಂತೆ 12 ಜನ ಆರೋಪಿಗಳ ಜಾಮೀನು ಅರ್ಜಿಯನ್ನು ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಕಲಬುರಗಿ ಮೂರನೇ ಜೆಎಮ್ಎಫ್ಸಿ ನ್ಯಾಯಾಲಯವು ವಜಾ ಮಾಡಿ ಆದೇಶವನ್ನು ಹೊರಡಿಸಿದೆ.

ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ರಾಜೇಶ್ ಹಾಗರಗಿ, ಚೇತನ ನಂದಗಾಂವ್, ಅರುಣ್ ಕುಮಾರ್, ಸುಮಾ ಕಂಬಳಿಮಠ, ಸಿದ್ದಮ್ಮಾ, ಮಹಾಂತೇಶ ಪಾಟೀಲ್, ಹಯ್ಯಾಳಿ ದೇಸಾಯಿ, ಸುರೇಶ್ ಕಾಟೇಗಾಂವ್ ಸೇರಿದಂತೆ ಒಟ್ಟು 12 ಜನರ ಜಾಮೀನು ಅಜಿ೯ಯನ್ನು ನಿರಾಕರಣೆ ಮಾಡಿ ಆದೇಶ ಹೊರಡಿಸಿದೆ.

ಕಾಶಿನಾಥ್ ಮತ್ತು ಮಂಜುನಾಥ್ ಸಿಐಡಿ ಕಸ್ಟಡಿ ಅಂತ್ಯ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಂಜಿನಿಯರ್ ಮಂಜುನಾಥ್ ಮೇಳಕುಂದಿ ಹಾಗೂ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಅವರ ಸಿಐಡಿ ಕಸ್ಟಡಿಯೂ ಬುಧವಾರ ಅಂತ್ಯವಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ,ತದನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!