ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಶಾಲೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಆಸಿಡ್ ಎರಚಿದ ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ.
ಆಸಿಡ್ ಎರಚುವ ಧೈರ್ಯ ಮಾಡುವವರಿಗೆ ಭಯ ಹುಟ್ಟಿಸುವ ಅಗತ್ಯ ಇದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಸಾರ್ವಜನಿಕವಾಗಿ ಅವರನ್ನು ಗಲ್ಲಿಗೇರಿಸಿ. ಒಬ್ಬರಿಗೆ ಈ ರೀತಿ ಶಿಕ್ಷೆ ನೀಡಿದರೆ ಇನ್ಯಾರೂ ಈ ರೀತಿ ನೀಚ ಕೆಲಸ ಮಾಡಲು ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಇಬ್ಬರು ಬೈಕ್ನಲ್ಲಿ ಬಂದು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಬಾಲಕಿ ಮೇಲೆ ಆಸಿಡ್ ಎರಚಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.