ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಪ್ಪು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಈ ಮಧ್ಯೆ, ಕೆಎಂಎಫ್ ಸಹ ಗಂಧದಗುಡಿ ಚಿತ್ರಕ್ಕೆ ತನ್ನ ಬೆಂಬಲ ನೀಡಿದ್ದು, ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರು ಮುದ್ರಿಸುವ ಮೂಲಕ ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು ಕೆಎಂಎಫ್ ನಿರ್ಧರಿಸಿದೆ.
ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೆಎಂಎಫ್ ಈ ರೀತಿ ಗೌರವಿಸಲು ನಿರ್ಧರಿಸಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.
ಈ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಕೆಎಂಎಫ್ ಅಂಬಾಸಿಡರ್ ಆಗಿದ್ದರು.