ಜಾತಿ, ಮತ, ಧರ್ಮ ನೋಡದೇ ಹಂತಕರಿಗೆ ಶಿಕ್ಷೆ ಕೊಡಿಸಿ: ಸಿಎಂಗೆ ಶಾ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್, ಮಸೂದ್, ಫಾಸಿಲ್ ಹತ್ಯೆ ಸಂಬಂಧ ಯಾವುದೇ ಜಾತಿ, ಮತ,ಧರ್ಮ ನೋಡದೇ ತನಿಖೆ ನಡೆಸಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಎಂ ಬಸವರಾಜ ಬೊಮ್ಮಾಯಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಂದು ಬೆಂಗಳೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಕೇಂದ್ರ ಗೃಹ ಸಚಿವ ಚರ್ಚೆ ನಡೆಸಿಡಿದ್ದು, ಯಾವುದೇ ಜಾತಿ, ಮತ,ಧರ್ಮ ನೋಡದೇ ತನಿಖೆ ಮಾಡಿಸಿ ಎಂದಿರುವ ಅಮಿತ್ ಶಾ ಕೇಸ್‌ಗಳನ್ನ ತ್ವರಿತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಗೊಳಪಡಿಸಿ ಎಂದಿದ್ದಾರೆ.

ಈ ಮಧ್ಯೆ ಕೇವಲ ಸಚಿವರು ಮತ್ತು ಶಾಸಕರನ್ನು ಮಾತ್ರ ಗಮನಿಸುವುದಲ್ಲ. ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಿಎಂ ಬೊಮ್ಮಾಯಿ‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ರೂಪದಲ್ಲಿ ಸೂಚನೆ ನೀಡಿದ್ದಾರೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ರೋಡ್ ಮ್ಯಾಪ್ ಸಿದ್ಧಪಡಿಸಿ, ಪ್ರತಿ ತಿಂಗಳೂ ವರದಿ ಕಳುಹಿಸಿಕೊಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೇಂದ್ರ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!