Thursday, March 23, 2023

Latest Posts

ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಖಚಿತ : ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬರೋಬ್ಬರಿ ಆರು ಕೋಟಿ ರೂಪಾಯಿ ನಗದು ದೊರೆತಿದೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತ ಮರುಸ್ಥಾಪಿಸಿದ್ದೇ ಬಿಜೆಪಿ. ಅದು ಸರ್ವಸ್ವತಂತ್ರ್ಯವಾಗಿದೆ. ಸಮಗ್ರ ತನಿಖೆ ನಡೆಯಲಿ. ತಪ್ಪು ಯಾರದ್ದೇ ಆಗಿರಲಿ ಶಿಕ್ಷೆ ಖಚಿತ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!