ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಲ್ಲೆಡೆ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿ ನೀಡಲಿದ್ದಾರೆ.
ಅವರ ಭೇಟಿಯ ವೇಳೆ ಜಿಲ್ಲೆಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಭೀಮಸಮುದ್ರ ಗ್ರಾಮದ ಹೆಲಿಪ್ಯಾಡ್ ಗೆ ಆಗಮಿಸಿ, ಭೀಮಸಮುದ್ರ ಗ್ರಾಮದಿಂದ ಕಾರ್ ಮೂಲಕ ಚಿತ್ರದುರ್ಗಕ್ಕೆ ಬರಲಿದ್ದಾರೆ.
ಬೆಳಗ್ಗೆ 11ಕ್ಕೆ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಿ, ಚಿತ್ರದುರ್ಗ ಆಮ್ ಆದ್ಮಿ ಅಭ್ಯರ್ಥಿ ಬಿ.ಇ.ಜಗಧೀಶ ಪರ ಪ್ರಚಾರ ನಡೆಸಲಿದ್ದಾರೆ.
ಈ ವೇಳೆ ಆಮ್ ಆದ್ಮಿ ಪಕ್ಷದ ರಾಜ್ಯಾದ್ಯಕ್ಷ ಪೃಥ್ವಿರೆಡ್ಡಿ, ಪ್ರಚಾರ ಸಮಿತಿ ಅದ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಸಾಥ್ ನೀಡಲಿದ್ದಾರೆ.