ನಾಳೆ ಪಂಜಾಬ್ ಸಿಎಂ ಮದುವೆ: ಯಾರೀಕೆ ಮನೆಗೆ ಬರುವ ಭಾಗ್ಯಲಕ್ಷ್ಮೀ??

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್ ಮುಖ್ಯಮಂತ್ರಿ ಭಗವಂತ್​ ಮಾನ್ ನಾಳೆ ಚಂಡೀಗಢದ ತಮ್ಮ ನಿವಾಸದಲ್ಲಿ ಸಪ್ತಪದಿ ತುಳಿಯಲಿದ್ದಾರೆ.
ಡಾ. ಗುರುಪ್ರಿತ್ ಕೌರ್​ ಜೊತೆ ಖಾಸಗಿ ಸಮಾರಂಭದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ 2ನೇ ಮದುವೆಯಾಗಲಿದ್ದಾರೆ.ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ, ಆಪ್​ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​ ಭಾಗಿಯಾಗಲಿದ್ದಾರೆ.
ಭಗವಂತ್ ಮಾನ್​ ಈಗಾಗಲೇ 2015ರಲ್ಲಿ ಇಂದ್ರಪ್ರೀತ್ ಕೌರ್ ಜೊತೆ ಮದುವೆ ಮಾಡಿಕೊಂಡಿದ್ದರು. ಆದರೆ, ಆರು ವರ್ಷಗಳ ಹಿಂದೆ ಅವರೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ.


ಡಾ. ಗುರುಪ್ರೀತ್ ಕೌರ್​ ಎಂಬಿಬಿಎಎಸ್​​ ಪದವೀಧರೆ ಆಗಿದ್ದು, ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆಂದು ತಿಳಿದು ಬಂದಿದೆ. ಭಗವಂತ್ ಮಾನ್​​ ಅವರ ತಾಯಿ ಹಾಗೂ ಸಹೋದರಿ ಸೇರಿಕೊಂಡು ವಧುವಿನ ಆಯ್ಕೆಮಾಡಿದ್ದಾರಂತೆ.
ಆರು ವರ್ಷಗಳ ಹಿಂದೆ ಭಗವಂತ್ ಮಾನ್​ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದು, ಸದ್ಯ ಅವರು ಅಮೆರಿಕಾದಲ್ಲಿ ಎರಡು ಮಕ್ಕಳೊಂದಿಗೆ ವಾಸ ಮಾಡುತ್ತಿದ್ದಾರೆ. ಭಗವಂತ್ ಮಾನ್​ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!