424 ಅಧಿಕಾರಿಗಳಿಗೆ ನೀಡಿದ ಭದ್ರತೆ ವಾಪಸ್ ಪಡೆದ ಭಗವಂತ್‌ ಮಾನ್‌ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ರಾಜ್ಯದಲ್ಲಿ 424 ಅಧಿಕಾರಿಗಳಿಗೆ ಒದಗಿಸಿದ ಭದ್ರತೆಯನ್ನು ಹಿಂತೆಗೆದುಕೊಂಡಿದೆ. ಇದರಲ್ಲಿ  ನಿವೃತ್ತ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರು ಮತ್ತು ರಾಜಕೀಯ ವ್ಯಕ್ತಿಗಳು ಈ ಸಾಲಿನಲ್ಲಿದ್ದಾರೆ.

ಕಳೆದ ಏಪ್ರಿಲ್‌ ತಿಂಗಳಲ್ಲಿ ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಮತ್ತು ಇತರ ನಾಯಕರು ಸೇರಿದಂತೆ 184 ಜನರ ಭದ್ರತೆಯನ್ನು ಹಿಂತೆಗೆದುಕೊಳ್ಳುವಂತೆ ಪಂಜಾಬ್ ಸರ್ಕಾರ ಆದೇಶಿಸಿತ್ತು. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಪುತ್ರ ರಣೀಂದರ್‌ ಸಿಂಗ್‌ ಮತ್ತು ಕಾಂಗ್ರೆಸ್‌ ಶಾಸಕ ಪರತಾಪ್‌ ಸಿಂಗ್‌ ಬಜ್ವಾವೆರೆ ಅವರ ಪತ್ನಿ ಅವರ ಕುಟುಂಬದ ಭದ್ರತೆಯನ್ನು ಕಳೆದ ತಿಂಗಳು ಹಿಂಪಡೆಯಲಾಗಿತ್ತು. ಇದೀಗ ಅಧಿಕಾರಿಗಳ ಭದ್ರತೆಯನ್ನೂ ಕೂಡ ವಾಪಸ್‌ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!