ಆರ್​ಸಿಬಿ ಬೌಲಿಂಗ್ ದಾಳಿಗೆ ಎಡವಿದ ಪಂಜಾಬ್: ಗೆಲುವಿಗೆ ಸಾಧಾರಣ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕೃನಾಲ್ ಪಾಂಡ್ಯ ಹಾಗೂ ಸುಯಾಶ್ ಶರ್ಮಾ ಮಾರಕ ದಾಳಿ ಎಡವಿದ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್‌ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಆರ್‌ಸಿಬಿಗೆ ಸ್ಪರ್ಧಾತ್ಮಕ ಗುರಿ ಸಿಕ್ಕಿದೆ.

ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು.

ಪಂಜಾಬ್ ಕಿಂಗ್ಸ್‌ ಆರಂಭಿಕ ಬ್ಯಾಟರ್‌ಗಳಾದ ಪ್ರಿಯಾನ್ಶ್ ಆರ್ಯಾ ಹಾಗೂ ಪ್ರಭ್‌ಸಿಮ್ರನ್ ಸಿಂಗ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. 22 ರನ್ ಗಳಿಸಿದ್ದ ಪ್ರಿಯಾನ್ಶ್ ಆರ್ಯಾ ಹಾಗೂ 33 ರನ್ ಗಳಿಸಿದ ಪ್ರಭ್‌ಸಿಮ್ರನ್ ಸಿಂಗ್ ಅವರನ್ನು ಬಲಿ ಪಡೆಯುವಲ್ಲಿ ಕೃನಾಲ್ ಪಾಂಡ್ಯ ಯಶಸ್ವಿಯಾದರು.

ಇನ್ನು ಲಿಯಾಮ್ ಲಿವಿಂಗ್‌ಸ್ಟೋನ್ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ರೊಮ್ಯಾರಿಯೋ ಶೆಫರ್ಡ್ ತಾವೆಸೆದ ಮೊದಲ ಓವರ್‌ನಲ್ಲೇ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ನೆಹಾಲ್ ವದೇರಾ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಇನ್ನು 29 ರನ್ ಗಳಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಒಂದು ರನ್ ಗಳಿಸಿದ ಮಾರ್ಕಸ್ ಸ್ಟೋನಿಸ್ ಅವರನ್ನು ಒಂದೇ ಓವರ್‌ನಲ್ಲಿ ಬಲಿ ಪಡೆಯುವಲ್ಲಿ ಸುಯಾಶ್ ಶರ್ಮಾ ಯಶಸ್ವಿಯಾದರು.

ಶಶಾಂಕ್ ಸಿಂಗ್ ಹಾಗೂ ಮಾರ್ಕೊ ಜಾನ್ಸನ್​ 37 ಎಸೆತಗಳಲ್ಲಿ ಕೇವಲ 43 ರನ್​ಗಳಿಸಲು ಮಾತ್ರ ಸಾಧ್ಯವಾಯಿತು. ಶಶಾಂಕ್ ಸಿಂಗ್ 33 ಎಸೆತಗಳಲ್ಲಿ ಕೇವಲ ಒಂದೇ ಒಂದು ಫೋರ್​ ಸಹಿತ 31 ರನ್​ಗಳಿಸಿದರು. ಜಾನ್ಸನ್​​ 20 ಎಸೆತಗಳಲ್ಲಿ 2 ಬೌಂಡರಿ ಸಹಿತ ಅಜೇಯ 25ರನ್​ಗಳಿಸಿ ಪಂಜಾಬ್ ಮೊತ್ತವನ್ನ 150ರ ಗಡಿ ದಾಟುವಂತೆ ಮಾಡಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!