ಫೆ.17ರಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಹಾಕಿ: ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆ.17ರಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿ ಮಾತನಾಡಿ, ಫೆ. 17 ರಂದು ಹಾಕುವ ಬಸವಣ್ಣನವರ ಫೋಟೊ ಕೆಳಗೆ ವಿಶ್ವ ಗುರು ಬಸವಣ್ಣ-ಸಾಂಸ್ಕೃತಿಕ ನಾಯಕ” ಎಂದು ನಮೂದಿಸಬೇಕು ಎಂದಿದ್ದಾರೆ.

ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಜಾತಿ ವಿಷಯವನ್ನು ತಗಲು ಹಾಕಿ ಕೆಲವರು ಮಾತನಾಡಿದ್ದಾರೆ. ಆದರೆ ಯಾರು ಯಾವ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿರೋದಿಲ್ಲ ಇಷ್ಟಾದ್ರೂ ಗೊತ್ತಿರಲಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!