ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು,ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಸಂಕ್ರಾಂತಿಯ ಶುಭ ಕೋರಿ ರಾಜಕೀಯ ಸಮಾಲೋಚನೆ ನಡೆಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಒಬ್ಬರ ಮೇಲೊಬ್ಬರಂತೆ ದೇವೇಗೌಡ ಹಾಗೂ ಕುಮಾರಸ್ವಾಮಿ ಮನೆಗೆ ಭೇಟಿ ನೀಡುತ್ತಿದ್ದಾರೆ.
ಭಾನುವಾರ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರಲ್ಲದೆ ರಾಜಕೀಯ ಚರ್ಚೆಯನ್ನೂ ಮಾಡಿದರು ಎಂದು ಮೂಲಗಳು ತಿಳಿಸಿವೆ.