Tuesday, March 28, 2023

Latest Posts

ಮಂಡ್ಯ ಉಸ್ತುವಾರಿ ಸಚಿವ ಸ್ಥಾನದಿಂದ ಆರ್.ಅಶೋಕ್ ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಂಡ್ಯ ಉಸ್ತುವಾರಿ ಸಚಿವ ಸ್ಥಾನದಿಂದ ಆರ್.ಅಶೋಕ್ ಅವರನ್ನು ಕೈಬಿಡಲಾಗಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಂಡ್ಯ ಉಸ್ತುವಾರಿ ಜವಾಬ್ದಾರಿಯಿಂದ ಸಚಿವ ಆರ್.ಅಶೋಕ್ ಅವರನ್ನು ಮುಕ್ತ ಮಾಡಲಾಗಿದೆ.ಕಂದಾಯ ಸಚಿವರಾಗಿರುವ ಆರ್.ಅಶೋಕ್ ಅವರಿಗೆ ಬೇರೆಯ ಹಲವು ಕಾರ್ಯಕ್ರಮಗಳ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು.

ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಉಸ್ತುವಾರಿ ಸಚಿವರಾನ್ನಾಗಿ ಜನವರಿ 26ರಂದು ನೇಮಕ ಮಾಡಲಾಗಿತ್ತು.
ಆದ್ರೆಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ ಮಾಡುವಂತೆ ಆರ್.ಅಶೋಕ್ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!