ವಯನಾಡಿನ ಜೊತೆಗೆ ರಾಯ್​ಬರೇಲಿಯಲ್ಲೂ ರಾಹುಲ್ ಗಾಂಧಿ ಸೋಲು ಖಚಿತ: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್​ ಬಾಬಾ ವಯನಾಡಿನ ಜೊತೆಗೆ ರಾಯ್​ಬರೇಲಿಯಲ್ಲೂ ಭಾರೀ ಅಂತರದಿಂದ ಸೋಲುವುದು ಖಂಡಿತ. ಭಯದಲ್ಲಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್​ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ರಾಹುಲ್​ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆಯನ್ನು ಎದುರಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಅಮೇಠಿಯಿಂದ ಸೋತ ಬಳಿಕ ವಯನಾಡಿಗೆ ವಲಸೆ ಹೋಗಿದ್ದರು. ಈ ಬಾರಿ ವಯನಾಡಿನಲ್ಲಿ ಸೋಲುತ್ತಾರೆ ಎಂಬ ಅರಿವಾದ ಬಳಿಕ ಅಮೇಠಿ ಬದಲು ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಶಾ ಹೇಳಿದರು.

ಸಮಸ್ಯೆ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಅಲ್ಲ. ನಿಮ್ಮಲ್ಲೇ ಸಮಸ್ಯೆ ಇಟ್ಟುಕೊಂಡು ಕ್ಷೇತ್ರ ಬದಲಾವಣೆ ಮಾಡುತ್ತಿದ್ದರೆ, ಜನರು ನಿಮ್ಮನ್ನು ಹುಡುಕಿ ಮತ್ತೆ ಸೋಲಿಸುತ್ತಾರೆ. ರಾಯ್​ಬರೇಲಿಯಲ್ಲಿ ನಿಮ್ಮ ಸೋಲು ಪಕ್ಕಾ ಎಂದು ಶಾ ಭವಿಷ್ಯ ನುಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೊಂದು ಅವಧಿಗೆ ಗೆದ್ದು ಅಧಿಕಾರಕ್ಕೆ ಬಂದರೆ, ಮೀಸಲಾತಿಯನ್ನು ರದ್ದು ಮಾಡುತ್ತಾರೆ ಎಂದು ರಾಹುಲ್ ಬಾಬಾ ಅಂಡ್ ಕಂಪನಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಎರಡು ಅವಧಿಯಲ್ಲಿ ಮೀಸಲಾತಿಯನ್ನು ನಮ್ಮ ಸರ್ಕಾರ ಮುಟ್ಟಲಿಲ್ಲ. ಬಿಜೆಪಿ ಅಧಿಕಾರಲ್ಲಿ ಇರುವವರೆಗೆ ಮೀಸಲಾತಿಯನ್ನು ರದ್ದು ಮಾಡಲು ಸಾಧ್ಯವಿಲ್ಲ. ಇದು ಮೋದಿ ಗ್ಯಾರಂಟಿ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!