ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ಗೆ ಮಹೇಂದ್ರ ಸಿಂಗ್ ಧೋನಿ ಇದ್ದಂತೆ, ಕಾಂಗ್ರೆಸ್ಗೆ ಅವರ ನಾಯಕ ರಾಹುಲ್ ಗಾಂಧಿ ಅತ್ಯುತ್ತಮ ಫಿನಿಶರ್ (ಪಕ್ಷವನ್ನು ಸಮಾಧಿ ಮಾಡುವ ವ್ಯಕ್ತಿ) ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ.
ಮಧ್ಯಪ್ರದೇಶದ ಸಿದ್ಧಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತದ ಅತ್ಯುತ್ತಮ ಕ್ರಿಕೆಟಿಗ ಯಾರು? ಧೋನಿ ಎಂದು ಎಲ್ಲರಿಗೂ ಗೊತ್ತು. ಆದರೆ ಭಾರತದ ರಾಜಕೀಯದಲ್ಲಿ ಉತ್ತಮ ಫಿನಿಶರ್ ಯಾರು ಎಂದು ಯಾರಾದರೂ ನನ್ನನ್ನು ಕೇಳಿದಾಗ, ನಾನು ರಾಹುಲ್ ಗಾಂಧಿ ಎಂದು ಹೇಳುತ್ತೇನೆ, ಏಕೆಂದರೆ ಈಗ ಎಲ್ಲರೂ ಕಾಂಗ್ರೆಸ್ ತೊರೆಯುತ್ತಿದ್ದಾರೆ ಮತ್ತು ರಾಹುಲ್ ಕೊನೆಯವರು. “ಅಲ್ಲಿಗೆ ಪಕ್ಷ ಅವಸಾನ ಆಗಿ ಹೋಗಿರುತ್ತದೆ’” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.