ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಮೋದಿ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಉತ್ತರ ಭಾರತದ ಪಪ್ಪು ಆದ್ರೆ, ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್ ಎಂದು ಅಣ್ಣಾಮಲೈ ಟೀಕಿಸಿದ್ದಾರೆ.
ಹೀಗೆಯೇ ಮಾತನಾಡುತ್ತಾ ಹೋದರೆ ‘I.N.D.I.A’ ಮೈತ್ರಿಕೂಟದ ಮತಬ್ಯಾಂಕ್ ಕುಸಿಯುತ್ತಲೇ ಹೋಗುತ್ತದೆ. ಈಗ ‘I.N.D.I.A’ ಮೈತ್ರಿಕೂಟದ ಮತಗಳ ಪ್ರಮಾಣ ಶೇಕಡಾ ಐದಕ್ಕೆ ಇಳಿದಿದೆ. ಉದಯನಿಧಿ ಹೀಗೆಯೇ ಮುಂದುವರಿದರೆ, ‘I.N.D.I.A’ ಮೈತ್ರಿಕೂಟದ ಮತಗಳು ಶೇಕಡಾ 20 ರಷ್ಟು ಕಡಿಮೆಯಾಗುತ್ತವೆ. ಒಂದು ವಿಚಾರದ ಬಗ್ಗೆ ಮಾತನಾಡಿದ ನಂತರ, ಆಕ್ಷೇಪಣೆ ಬಂದಾಗ ಅದನ್ನು ವಿವರಿಸುವುದನ್ನು ಮುಂದುವರಿಸುತ್ತಾರೆ. ಕಾಂಗ್ರೆಸ್ ಪಕ್ಷವೇ ಉದಯನಿಧಿ ಭಾಷಣವನ್ನು ವಿರೋಧಿಸುತ್ತಿದೆ ಎಂದೂ ತಮಿಳುನಾಡಲ್ಲಿ ಅಣ್ಣಾಮಲೈ ಹೇಳಿಕೊಂಡಿದ್ದಾರೆ.