ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮುಂಜಾನೆ ಹರ್ಯಾಣದ ಜಜ್ಜರ್ ಜಿಲ್ಲೆಯ ಛಾರಾ ಗ್ರಾಮಕ್ಕೆ ತೆರಳಿ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ.
ವೀರೇಂದ್ರ ಆರ್ಯ ಅಖಾಡಕ್ಕೆ ತೆರಳಿ ಬಜರಂಗ್ ಪುನಿಯಾ, ದೀಪಕ್ ಪುನಿಯಾ ಹಾಗೂ ಇನ್ನಿತರರನ್ನು ಬೇಟಿ ಮಾಡಿದ್ದಾರೆ.
ಭಾರತದ ಕುಸ್ತಿ ಫೆಡರೇಷನ್ ವಿವಾದ ನಡೆಯುತ್ತಿರುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ. ಕುಸ್ತಿಪಟುಗಳೊಂದು ಮಾತನಾಡಿ ಕೆಲ ಸಮಯ ಕಳೆದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕುಸ್ತಿ ಫೆಡರೇಷನ್ನ ಹೊಸ ಸಂಘಟನೆಯನ್ನು ರದ್ದುಗೊಳಿಸಲಾಗಿದೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿತ್ತು.