ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶಾದ್ಯಂತ ಪರ್ಯಟನೆಗೆ ಸಿದ್ಧತೆ ನಡೆಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ದೇಶದ ಜನರನ್ನು ಒಗ್ಗೂಡಿಸುವ ಸುದೀರ್ಘ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಚಟುವಟಿಕೆಗಳನ್ನು ಸಿದ್ಧಪಡಿಸಿದೆ. ಈ ಕ್ರಮದಲ್ಲಿ ಸೆ.7ರಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ಯಾತ್ರೆ’ ಹೆಸರಿನಲ್ಲಿ ದೇಶಾದ್ಯಂತ ಪಾದಯಾತ್ರೆ ನಡೆಸಲಿದ್ದಾರೆ.
ಪಕ್ಷದ ಹಿರಿಯ ನಾಯಕರಾದ ಜೈರಾಮ್ ರಮೇಶ್ ಮತ್ತು ದಿಗ್ವಿಜಯ್ ಸಿಂಗ್ ಈಗಾಗಲೇ ಪಾದಯಾತ್ರೆಯ ಲೋಗೋ, ಟ್ಯಾಗ್ ಲೈನ್ ಮತ್ತು ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಮಿಲ್ ಕದಂ.. ಜುಡೇ ವತನ್ (ಒಂದೊಂದು ಹೆಜ್ಜೆ ಇಡೋಣ.. ದೇಶವನ್ನು ಒಗ್ಗೂಡಿಸೋಣ) ಎಂಬ ಘೋಷಣೆಯೊಂದಿಗೆ ಜನರೊಂದಿಗೆ ಬೆರೆಯುತ್ತೇವೆ. ಕಾಂಗ್ರೆಸ್ ಪಾದಯಾತ್ರೆಗಾಗಿ ವಿಶೇಷ ವೆಬ್ಸೈಟ್ ಅನ್ನು ಸಹ ಪ್ರಾರಂಭಿಸಿದೆ. ಈ ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಗುತ್ತಿದೆ. ಅಲ್ಲಿಂದ 148 ದಿನಗಳ ಕಾಲ ಮುಂದುವರಿದು ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ. ಪ್ರತಿನಿತ್ಯ 25 ಕಿಮೀ ಪ್ರಯಾಣವು 12 ರಾಜ್ಯಗಳಲ್ಲಿ 3,500 ಕಿಮೀ ವರೆಗೆ ಮುಂದುವರಿಯಲಿದೆ.
ಈ ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆಗೆ 50 ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಮಾರ್ಗ ಮಧ್ಯೆ ಆಯಾ ರಾಜ್ಯಗಳ ಕಾಂಗ್ರೆಸ್ ಮುಖಂಡರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಈ ಯಾತ್ರೆ ಯಾವುದೇ ಪಕ್ಷಕ್ಕೆ ಸೀಮಿತವಾದ ಯಾತ್ರೆಯಲ್ಲ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಲು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ವರಿಷ್ಠರು ತಿಳಿಸಿದ್ದಾರೆ. ಇದೇ ವೇಳೆ ಈ ರ್ಯಾಲಿ, ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುವುದು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕೂಡ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.