ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರೋಧ ಪಕ್ಷವು ಬಿಜೆಪಿ ವಿರುದ್ಧ ಮಾತ್ರವಲ್ಲ, ಭಾರತೀಯ ರಾಜ್ಯದ ವಿರುದ್ಧವೂ ಹೋರಾಡುತ್ತಿದೆ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕಾಂಗ್ರೆಸ್ನ “’ಕೊಳಕು ಸತ್ಯ ಈಗ ಬಹಿರಂಗವಾಗಿದೆ’ ಎಂದು ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಕಾಂಗ್ರೆಸ್ನ ಹೊಸ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ಟೀಕಿಸಿದ್ದರು.
ವಿರೋಧ ಪಕ್ಷ ಕಾಂಗ್ರೆಸ್ ಈಗ ಬಿಜೆಪಿ ವಿರುದ್ಧ ಮಾತ್ರವಲ್ಲ, ಭಾರತೀಯ ರಾಜ್ಯದ ವಿರುದ್ಧವೂ ಹೋರಾಡುತ್ತಿದೆ. ನಮ್ಮ ಸಿದ್ಧಾಂತವು ಆರ್ಎಸ್ಎಸ್ ಸಿದ್ಧಾಂತದಂತೆ ಸಾವಿರಾರು ವರ್ಷಗಳಷ್ಟು ಹಳೆಯದು ಮತ್ತು ಅದು ಸಾವಿರಾರು ವರ್ಷಗಳಿಂದ ಆರ್ಎಸ್ಎಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದೆ. ನಾವು ನ್ಯಾಯಯುತ ಹೋರಾಟ ನಡೆಸುತ್ತಿದ್ದೇವೆ ಎಂದು ಭಾವಿಸುವುದಿಲ್ಲವೇ? ಬಿಜೆಪಿ ಮತ್ತು ಆರ್ಎಸ್ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿದೆ. ನಾವು ಈಗ ಬಿಜೆಪಿ, ಆರ್ಎಸ್ಎಸ್ ಮತ್ತು ಭಾರತೀಯ ರಾಜ್ಯದ ವಿರುದ್ಧವೂ ಹೋರಾಡುತ್ತಿದ್ದೇವೆ ಎಂದು ಹೇಳಿದ್ದರು.
ಈ ಹೇಳಿಕೆಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ‘ಇನ್ನು ಬಚ್ಚಿಟ್ಟುಕೊಳ್ಳುವುದೇನೂ ಇಲ್ಲ. ಕಾಂಗ್ರೆಸ್ಸಿನ ಕೊಳಕು ಸತ್ಯವನ್ನು ಅದರ ನಾಯಕರೇ ಬಯಲು ಮಾಡಿದ್ದಾರೆ. ರಾಷ್ಟ್ರಕ್ಕೆ ತಿಳಿದಿರುವ ವಿಷಯವನ್ನು ಸ್ಪಷ್ಟವಾಗಿ ಹೇಳಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ನಾನು ಪ್ರಶಂಸಿಸುತ್ತೇನೆ. ಅವರೇ ಹೇಳಿದಂತೆ ಕಾಂಗ್ರೆಸ್ ಭಾರತೀಯ ರಾಜ್ಯದ ವಿರುದ್ಧ ಹೋರಾಡುತ್ತಿದೆ’ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಟೀಕಿಸಿದ್ದಾರೆ.
ದುರ್ಬಲ ಭಾರತವನ್ನು ಬಯಸುವ ಎಲ್ಲಾ ಶಕ್ತಿಗಳನ್ನು ಪ್ರೋತ್ಸಾಹಿಸುವ ಇತಿಹಾಸ ಕಾಂಗ್ರೆಸ್ಗೆ ಇದೆ. ಅವರ ಅಧಿಕಾರದ ದುರಾಸೆ ಎಂದರೆ ರಾಷ್ಟ್ರದ ಸಮಗ್ರತೆಯೊಂದಿಗೆ ರಾಜಿ ಮಾಡಿಕೊಳ್ಳುವುದು ಮತ್ತು ಜನರ ನಂಬಿಕೆಗೆ ದ್ರೋಹ ಮಾಡುವುದು. ಆದರೆ, ಭಾರತದ ಜನರು ಬುದ್ಧಿವಂತರು. ಅವರು ರಾಹುಲ್ ಗಾಂಧಿ ಮತ್ತು ಅವರ ಕೊಳೆತ ಸಿದ್ಧಾಂತವನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ’ ಎಂದು ಬಿಜೆಪಿ ಮುಖ್ಯಸ್ಥ ನಡ್ಡಾ ಹೇಳಿದ್ದಾರೆ.
ರಾಜ್ಯ ಅಂದರೆ state ? Political science ನ ಸ್ಟೇಟ್ ಅಂದರೆ ದೇಶ?