ವಿಧಾನಸಭೆ ಚುನಾವಣೆ: ಇಂದಿನಿಂದ ಎರಡು ದಿನಗಳ ಕಾಲ ʻರಾಗಾʼ ಕರ್ನಾಟಕ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಹಲವು ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಜನರೊಂದಿಗೆ ಚರ್ಚೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ರಾಹುಲ್ ವೇಳಾಪಟ್ಟಿ ಪ್ರಕಾರ, ದೆಹಲಿಯಿಂದ ಕರ್ನಾಟಕದ ಹುಬ್ಬಳ್ಳಿಗೆ ಬೆಳಗ್ಗೆ 10.30ಕ್ಕೆ ತಲುಪಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಯ ಕೂಡಲ ಸಂಗಮಕ್ಕೆ ತೆರಳಲಿದ್ದಾರೆ. ಸಂಗಮನಾಥ ದೇವಸ್ಥಾನ, ಐಕ್ಯ ಲಿಂಗದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ನಂತರ ರಾಹುಲ್ ಗಾಂಧಿ ಬಸವ ಜಯಂತಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ವಿಜಯಪುರದ ಶಿವಾಜಿ ವೃತ್ತದ ಬಳಿ ಜನಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮರುದಿನ ಸೋಮವಾರ ಮಧ್ಯಾಹ್ನ ರಾಹುಲ್ ಗಾಂಧಿ ಕಬ್ಬು ಬೆಳೆಗಾರರೊಂದಿಗೆ ಚರ್ಚಿಸಲಿದ್ದಾರೆ. ವಿಶೇಷವಾಗಿ ಬೆಳಗಾವಿ ರಾಮದುರ್ಗ ಪ್ರದೇಶದಲ್ಲಿ ಸ್ಥಳೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಗದಗಕ್ಕೆ ತೆರಳಿ ಯುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ ಹಾವೇರಿ ಜಿಲ್ಲೆಯ ಹಂಗಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಅದೇ ದಿನ ರಾತ್ರಿ ಹುಬ್ಬಳ್ಳಿಗೆ ಮರಳಿ ಅಲ್ಲಿಂದ ದೆಹಲಿಗೆ ತೆರಳಲಿದ್ದಾರೆ. ಎರಡು ವಾರಗಳಲ್ಲಿ ರಾಹುಲ್ ಗಾಂಧಿ ಕರ್ನಾಟಕಕ್ಕೆ ಇದು ಎರಡನೇ ಭೇಟಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!