ರಾಹುಲ್​ ಗಾಂಧಿ ವಿರುದ್ಧ ಎಚ್​.ಡಿ. ಕುಮಾರಸ್ವಾಮಿ ಗರಂ: ಕಾರಣವೇನು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್​​ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್ ಮೂಲಕ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಅವರು, ವಿರುದ್ಧ ಟೀಕೆಸೈದ್ಧಾಂತಿಕ ಬದ್ಧತೆ ಎಂದರೆ ಏನು? ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಎಂದಿದ್ದಾರೆ.

ಕಾಂಗ್ರೆಸ್ ಚಿಂತನಾ ಶಿಬಿರದದಲ್ಲಿ ರಾಹುಲ್​ ಗಾಂಧಿ ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡುವ ಮೂಲಕ ರಾಹುಲ್​ ಗಾಂಧಿ ಅವರು ಪ್ರಾದೇಶಿಕ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸೈದ್ಧಾಂತಿಕ ಬದ್ಧತೆ ಎಂದರೆ ಏನು. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಹಿನ್ನೆಲೆಯ ನೆಪ ನೀಡಿ ಡಿಎಂಕೆ-ಎಲ್‌ಟಿಟಿಇ ಸಂಬಂಧವನ್ನು ಮುನ್ನೆಲೆಗೆ ತಂದು ಆ ಪಕ್ಷವನ್ನು ಸಂಪುಟದಿಂದ ಹೊರಗಿಡಲು, ಐ.ಕೆ. ಗುಜ್ರಾಲ್‌ ನೇತೃತ್ವದ ಸಂಯುಕ್ತ ರಂಗ ಸರಕಾರವನ್ನು ಉರುಳಿಸಿ.ಆಮೇಲೆ ಅದೇ ಡಿಎಂಕೆ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದು ಸೈದ್ದಾಂತಿಕ ಬದ್ಧತೆಯಾ ಎಂದು ಕಾಂಗ್ರೆಸ್​ಗೆ ಎಚ್​.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಯುಪಿಎ ಸರಕಾರದಲ್ಲಿ ಡಿಎಂಕೆಯ ಜತೆ 10 ವರ್ಷ ಅಧಿಕಾರ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ, ಕಾಂಗ್ರೆಸ್ ಪಕ್ಷ 10 ವರ್ಷ ಅಧಿಕಾರ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ, ದಾಕ್ಷಿಣ್ಯದಿಂದ ಎಂಬದನ್ನು ಮರೆಯಬಾರದು.ಮೈತ್ರಿ ಸರ್ಕಾರವೆನ್ನುವ ನೆಪದಲ್ಲಿ ಹಿಂಬಾಗಿಲಿನಿಂದ ಆಪರೇಷನ್​ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ಕೈ ಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯೇ ಅಥವಾ ಮಿತ್ರಪಕ್ಷಗಳನ್ನೇ ನುಂಗು ಹಾಕುವುದು ಸೈದ್ಧಾಂತಿ ಬದ್ಧತೆ ಇರಬಹುದು ಎಂದು ವ್ಯಂಗವಾಡಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!