ಸಿಎಎ ಕುರಿತು ರಾಹುಲ್ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್‌ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೌನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿಷಯವನ್ನು ಪಿಣರಾಯಿ ವಿಜಯನ್ ಅವರು ರಾಜಕೀಯ ದುರುದ್ದೇಶಕೋಸ್ಕರ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಆರೋಪಕ್ಕೆ ತಿರುಗೇಟು ಕೂಟ ಸಿಎಂ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದಾದ್ಯಂತ ಜಾರಿಗೊಳಿಸಿದ್ದು, ಇದರ ವಿರುದ್ಧ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಒಂದೇ ಒಂದು ಮಾತು ಆಡಿಲ್ಲ’ ಎಂದರು.

‘ತಮ್ಮ ಯಾತ್ರೆಯ ವೇಳೆ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡಲಿಲ್ಲ, ಯಾತ್ರೆಯ ನಂತರ ಅವರು ಈ ಬಗ್ಗೆ ಏನನ್ನೂ ಹೇಳಲಿಲ್ಲ’ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!