ರಾಹುಲ್ ಗಾಂಧಿ ರಾಜ್ಯ ಭೇಟಿ ಯಾವ ಪರಿಣಾಮ ಬೀರಲಾರದು: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇನ್ನೇನು ಚುನಾವಣೆ ಹತ್ತಿರ ಇದೆ ಎನ್ನುವಾಗ ರಾಜ್ಯಕ್ಕೆ ಭೇಟಿ ನೀಡಿದರೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಪರಿಣಾಮ ಬೀರದು, ಇನ್ನು ಬೆಳಗಾವಿ ಭೇಟಿ ಕೂಡ ಮಾಡಿದ್ದಾರೆ. ಆದರೆ ಇದ್ಯಾವುದೂ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಭಾರತದ ಪ್ರಜಾಪ್ರಭುತ್ವದ ಕುರಿತು ಲಂಡನ್‌ನಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರ ನಂತರ ಅವರು ರಾಜ್ಯಕ್ಕೆ ಭೇಟಿ ಕೊಟ್ಟರೆ ಅವರ ಮಾತಿಗೆ ಕಿಂಚಿತ್ತೂ ಬೆಲೆ ಇಲ್ಲ ಎಂದಿದ್ದಾರೆ.

ಕಾಂಗ್ರೆಸ್‌ನವರು ಆಶ್ವಾಸನೆ ಕೊಡೋದು ಬಿಟ್ಟು ಇನ್ನೇನು ಮಾಡಿದ್ದಾರೆ? ಅವರ ಟ್ರ್ಯಾಕ್ ರೆಕಾರ್ಡ್ ನೋಡಿ, ಬರೀ ಹೇಳಿಕೆ ಅಷ್ಟೆ ಕಾರ್ಯರೂಪಕ್ಕೆ ಏನೂ ಬಂದಿಲ್ಲ. ಇಂಥವರಿಗೆ ಯಾವ ಗ್ಯಾರೆಂಟಿ ಮೇಲೆ ಜನ ವೋಟ್ ಹಾಕ್ತಾರೆ ಎಂದಿದ್ದಾರೆ. ನಮ್ಮ ಅಭಿವೃದ್ಧಿ ಕಾರ್ಯಗಳೇ ನಮ್ಮ ಗ್ಯಾರೆಂಟಿ ಕಾರ್ಡ್, ಮತ್ತೆ ಅಧಿಕಾರಕ್ಕೆ ಖಂಡಿತವಾಗಿಯೂ ಬರುತ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!