ಹೊಸದಿಗಂತ ಡಿಜಿಟಲ್ ಡೆಸ್ಕ್ :
ಶ್ರೀಲಂಕಾ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.
ಚೇಸಿಂಗ್ ಇಳಿದ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕಳೆದುಕೊಂಡು ಆತಂಕ ಎದುರಿಸಿತು. ಆದರೆ ಕೆಎಲ್ ರಾಹುಲ್ ನಿಧಾನಗತಿಯ ಆಟದ ಮೂಲಕ ಭಾರತವನ್ನು ಗೆಲುವಿನ ದಡ ಸೇರಿಸಿದರು.
ನಾಯಕ ರೋಹಿತ್ ಶರ್ಮಾ 17 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಶುಬಮನ್ ಗಿಲ್ 21 ರನ್ ಸಿಡಿಸಿ ನಿರ್ಗಮಿಸಿದರು.
41 ರನ್ಗಳಿಗೆ 2 ವಿಕೆಟ್ ಕಳೆದುಕೊಂಡ ಭಾರತಕ್ಕೆ ಕೊಹ್ಲಿ ಆಟ ಸಾಥ್ ಸಿಕ್ಕಿಲ್ಲ. ಕೇವಲ 4 ರನ್ ಸಿಡಿಸಿ ಔಟಾದರು.
ಬಳಿಕ ಶ್ರೇಯಸ್ ಅಯ್ಯರ್ ಕೆಲ ಹೊತ್ತು ಹೋರಾಟ ನಡೆಸಿದರು. ಆದರೆ28 ರನ್ ಸಿಡಿಸಿ ಔಟಾದರು. ಈ ವೇಳೆ ಕುಸಿದ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಜೊತೆನೀಡಿದರು.
ಹಾರ್ದಿಕ್ ಪಾಂಡ್ಯ 36 ರನ್ ಸಿಡಿಸಿ ಔಟಾದರು . ಬಳಿಕ ಅಕ್ಸರ್ ಪಟೇಲ್ ಜೊತೆ ಇನ್ನಿಂಗ್ಸ್ ಮುಂದುವರಿಸಿದ ಕೆಎಲ್ ರಾಹುಲ್ ಟೀಂ ಇಂಡಿಯಾ ಆತಂಕ ದೂರ ಮಾಡಿದರು. ಅಕ್ಸರ್ ಪಟೇಲ್ 21 ರನ್ ಕಾಣಿಕೆ ನೀಡಿದರು. ನಂತರ ಬಂದ ಕುಲ್ದೀಪ ಯಾದವ್ ರಾಹುಲ್ ಗೆ ಉತ್ತಮ ಸಾಥ್ ನೀಡಿದರು.
ಕೆಎಲ್ ರಾಹುಲ್ ಅಜೇಯ 64 ರನ್ ಸಿಡಿಸಿದರು. ಕುಲ್ದೀಪ್ ಯಾದವ್ ಅಜೇಯ 10 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 43. 2ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು.