ಹೊಸದಿಗಂತ ವರದಿ, ಮಳವಳ್ಳಿ :
ಖಾಸಗಿ ಕ್ಲಿನಿಕ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ನಕಲಿ ವೈದ್ಯನೊಬ್ಬನ್ನು ಬಂಧಿಸಿರುವ ಘಟನೆ ತಾಲೂಕಿನ ಹಲಗೂರು ಸಮೀಪದ ತೊರೆಕಾಡನಹಳ್ಳಿಯಲ್ಲಿ ನಡೆದಿದೆ.
ಗ್ರಾಮದಲ್ಲಿ ಕೃಷ್ಣಮೂರ್ತಿ ಕ್ಲೀನಿಕ್ ನಡೆಸುತ್ತಿದ್ದ ಕೃಷ್ಣಮೂರ್ತಿ ಹೆಗಡೆ ಎಂಬುವರೇ ಬಂಧಿತ ಆರೋಪಿ. ತಾಲೂಕು ಆರೋಗ್ಯಾಧಿಕಾರಿ ಡಾ. ವೀರಭದ್ರಪ್ಪ ಮತ್ತು ಸಿಪಿಐ ಶ್ರೀಧರ್ ಅವರ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಖಾಸಗಿ ಕ್ಲಿನಿಕ್ ಗೆ ಬೀಗ ಜಡಿಯಲಾಗಿದೆ.
ತೊರೆಕಾಡನಹಳ್ಳಿಯಲ್ಲಿ ಚಿಕಿತ್ಸೆ ನಡೆಸುತ್ತಿದ್ದ ಕೃಷ್ಣಮೂರ್ತಿ ಹೆಗಡೆ 2019ರ ನವೆಂಬರ್ 19ರಂದು ತಾಲೂಕಿನ ದಡಮಹಳ್ಳಿ ಗ್ರಾಮದ ಶಿವಲಿಂಗೇಗೌಡ ಅವರಿಗೆ ಇಂಜಕ್ಷನ್ ನೀಡಿದ್ದರೆನ್ನಲಾಗಿದೆ. ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮವಾದ ಪರಿಣಾಮ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.