ಯುಗಾದಿಯ ಸಂಭ್ರಮಕ್ಕೆ ಮತ್ತಷ್ಟು ಕಳೆ ತಂದ ಮಳೆ: ರಾಜ್ಯದ ಹಲವೆಡೆಗೆ ವರುಣನ ಕೃಪೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಿದ್ದು, ವರುಣ ಯುಗಾದಿಯ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದ್ದಾನೆ.
ಬಿಸಿಲ ಬೇಗೆಗೆ ಬಸವಳಿದಿದ್ದ ಹಾವೇರಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದು ಇಳೆಗೆ ತಂಪೆರೆದಿದೆ. ಶಿಕಾರಿಪುರ ತಾಲೂಕಿನ ಅಡಗಂಟಿ ಗ್ರಾಮದಲ್ಲಿ ಕೂಡಾ ವರ್ಷಧಾರೆಯಾಗಿದ್ದು, ಹರ್ಷ ಹೆಚ್ಚಿಸಿದೆ.
ಇನ್ನು ವಿಜಯನಗರ ಜಿಲ್ಲೆಯಲ್ಲೂ ಮಳೆಯಾಗಿದೆ. ಉಚ್ಚೆಂಗಮ್ಮ ಜಾತ್ರೆಯ ಸಂಭ್ರಮದಲ್ಲಿದ್ದ ಜನತೆಗೆ ಕೆಲ ಕಾಲ ಸುರಿದ ಮಳೆ ಸಂತಸ ಇಮ್ಮಡಿಗೊಳಿಸಿದೆ. ಹಾಗೆಯೇ ದಾವಣಗೆರೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಸವಪಟ್ಟಣದಲ್ಲಿ ಕೂಡ ಮಳೆಯಾಗಿದೆ.
ಈ ನಡುವೆ ಬಿಸಿಲಿಗೆ ಹೈರಾಣಾಗಿರುವ ಬೆಂಗಳೂರು ನಗರದಲ್ಲಿ ಕೂಡ ಈ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!