WEATHER | ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ ತಿಂಗಳ ಅಂತ್ಯದಲ್ಲಿ ರಾಜ್ಯಾದ ಕೆಲವೆಡೆ ಮಳೆ ಅಬ್ಬರಿಸಿತ್ತು, ಹಾನಿಗಳೂ ಉಂಟಾಗಿತ್ತು. ಈಗ ಕಳೆದ ಎರಡು ಮುರು ದಿನಗಳಿಂದ ಕೊಂಚ ಬಿಡುವು ಪಡೆದಿತ್ತು.

ಇದೀಗ ಮತ್ತೆ ಮಳೆ ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ದೊರೆತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!