ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಎರಡು ವಾರಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿಸಿಲ ತಾಪ ಏರಿಕೆಯಾಗಿದ್ದು, ಜನರು ಮಳೆಗಾಗಿ ಹಾತೊರೆಯುವಂತಾಗಿದೆ. ಇಂದು ಬೆಂಗಳೂರು ಸೇರಿ ರಾಜ್ಯದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಮತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ನರಗುಂದ, ಗದಗ, ಹಾವೇರಿ, ಯಲ್ಲಾಪುರ, ಉಪ್ಪಿನಂಗಡಿ, ಕಾರ್ಕಳ, ಧರ್ಮಸ್ಥಳ, ಮುಲ್ಕಿ, ಖಜೂರಿ, ಶಿಗ್ಗಾಂವ್, ತಿಪಟೂರು, ಎನ್ಆರ್ಪುರ, ನಾಪೋಕ್ಲು, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ.