ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆರಾಜ್ಯ ತಮಿಳುನಾಡಿನಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.
ತಮಿಳುನಾಡಿನ ತಿರುಚಿ, ಕನ್ಯಾಕುಮಾರಿ, ಊಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದು, ಈ ಮೂಲಕ ಮಳೆಯಿಂದಾಗಿ ಕಳೆದೊಂದು ತಿಂಗಳಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಈ ಹಿಂದೆ ತೆಂಕಾಶಿ ಜಿಲ್ಲೆಯ ಕುಟ್ರಾಲಂ ಜಲಪಾತದಲ್ಲಿ 17 ವರ್ಷದ ಬಾಲಕನೊಬ್ಬ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ. ಮಧುರೈನಲ್ಲಿ ಛಾವಣಿ ಕುಸಿದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದ. ಇದುವರೆಗೆ 7 ಗುಡಿಸಲುಗಳು ಹಾಗೂ 14 ಜಾನುವಾರುಗಳಿಗೆ ಹಾನಿಯಾಗಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.