ಕರಾವಳಿಯಲ್ಲಿ ಕೊಂಚ ರಿಲ್ಯಾಕ್ಸ್ ಪಡೆದ ಮಳೆರಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಅಬ್ಬರಿಸಿದ ಮಳೆ ಕೊಂಚ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಗ್ಗಿನ ವೇಳೆ ಸಾಧಾರಣ ಮಳೆಯಾಗಿದ್ದು, ಆ ಬಳಿಕ ಬಿಸಿಲಿನ ವಾತಾವರಣವಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ‌ಕನ್ನಡ ಜಿಲ್ಲೆಯ ಹಲವೆಡೆ ಬೆಳಗ್ಗಿನಿಂದಲೇ ಬಿಸಿಲಿನ ವಾತಾವರಣವಿದೆ.

ಕಳೆದೆರಡು ವಾರಗಳಿಂದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಹಲವು ಮನೆಗಳು ಕುಸಿದು ಮನೆಮಂದಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ತೋಟಗಳಿಗೆ ನೀರು ನುಗ್ಗಿ ಕೃಷಿಕರು ಅಪಾರ ನಷ್ಟ ಅನುಭವಿಸಿದ್ದರು. ಇದೀಗ ಮಳೆ‌ ಕೊಂಚ ಬಿಡುವು ಪಡೆದಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!