ಒಂದು ಕಡೆ ಮಳೆ, ಮತ್ತೊಂದು ಕಡೆ ಉರಿಬಿಸಿಲು! ಹೀಟ್‌ಗೆ ಬೀದರ್‌ನಲ್ಲಿ ಕಾರ್ಮಿಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದೆರಡು ದಿನಗಳಿಂದ ರಾಜ್ಯದ ಕೆಲವೆಡೆ ಭರ್ಜರಿ ಮಳೆಯಾಗಿದೆ. ಆದರೆ ಗಡಿನಾಡು ಬೀದರ್‌ನಲ್ಲಿ ಮಾತ್ರ ಬಿಸಿಲು ಅತಿಯಾಗಿದೆ. ಬಿಸಿಲ ಝಳಕ್ಕೆ ನರೇಗಾ ಉದ್ಯೋಗ ಖಾತ್ರಿ ಕಾರ್ಮಿಕ ಮೃತಪಟ್ಟಿದ್ದಾರೆ.

ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿಟ್ಟಾ ಗ್ರಾಮದ ಮಲ್ಲಪ್ಪ ತೊಗರಖೇಡೆ (58) ನಿಧನರಾಗಿದ್ದಾರೆ.  ಬಿಸಿಲ ತಾಪಕ್ಕೆ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ವೇಳೆ ಮಲ್ಲಪ್ಪ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!