WEATHER UPDATE | ರಾಜ್ಯದಲ್ಲಿಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಕೆಲವು ಭಾಗಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಸಾಕಷ್ಟು ಹಾನಿಯಾಗಿದೆ.

ಇಂದು ಕೂಡ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಳನಾಡು ಜಿಲ್ಲೆಗಳು, ಕರಾವಳಿಯಲ್ಲಿ ಬಿರುಗಾಳಿ ಬೀಸಲಿದೆ. ಇನ್ನು ಕೊಡಗು, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಿನ್ನೆಯೂ ಮಲೆನಾಡಿನಲ್ಲಿ ಬಿರುಗಾಳಿ ಮಳೆಯಾಗಿದ್ದು, ಶಿವಮೊಗ್ಗದಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಮರಗಳು ಧರೆಗುರುಳಿ ಕಾರ್ ಜಖಂ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!