ಮಳೆರಾಯ ಅಡ್ಡ ಬಂದ್ರು ಇವತ್ತಿನ ಮ್ಯಾಚ್ ನಡೆಯೋದು ಪಕ್ಕಾ! ಹೇಗೆ ಸಾಧ್ಯ ಅಂತೀರಾ? ಇದನ್ನ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) ಮುಖಾಮುಖಿಯಾಗಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಳೆಯ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣವಿದ್ದು, ನಗರದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ವೆದರ್ ಡಾಟ್ ಕಾಮ್ ವರದಿ ಮಾಡಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ.

ಮಳೆ ಬಂದರೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭೂಮಿಯೊಳಗಿನ ನೀರನ್ನು ತ್ವರಿತವಾಗಿ ಹೀರಿಕೊಳ್ಳುವ ಭೂಗತ ವ್ಯವಸ್ಥೆ ಇದೆ. ಎಷ್ಟೇ ಮಳೆ ಬಂದರೂ ಕೆಲವೇ ನಿಮಿಷಗಳಲ್ಲಿ ಮೈದಾನ ಸಿದ್ಧವಾಗುತ್ತದೆ.

ಹೀಗಾಗಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಿರಂತರ ಮಳೆಯಿದ್ದರೂ ಮೋಡ ಕವಿದ ವಾತಾವರಣವಿದ್ದು, ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಹೀಗಾಗಿ ಇಂದು ಬೆಂಗಳೂರಿನಾದ್ಯಂತ ಮಳೆ ಸುರಿದರೂ ಜಿಟಿ ವಿರುದ್ಧ ಆರ್ ಸಿಬಿ ಆಡುವುದು ಖಚಿತ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!