ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡ ಹಾಗೂ ಗುಜರಾತ್ ತಂಡದ ನಡುವೆ ಪಂದ್ಯ ನಡೆಯಲಿದೆ. ಆಟವು 7:30 ಕ್ಕೆ ಪ್ರಾರಂಭವಾಗುತ್ತದೆ. ಮತ್ತು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಈ ನಡುವೆ ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ, RCB ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ನಿನ್ನೆ ಮಧ್ಯಾಹ್ನದಂತೆಯೇ ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂದ್ಯದ ವೇಳೆ ಮಳೆ ಬಂದರೆ ಪಂದ್ಯ ರದ್ದಾಗಿದರೂ ಅಚ್ಚರಿಯಿಲ್ಲ. ಆದ್ದರಿಂದ, RCB ಅಭಿಮಾನಿಗಳು ಇಂದು ಮಳೆ ಬರಬೇಡಪ್ಪ ಅಂತ ವರುಣ ದೇವನಿಗೆ ಪ್ರಾರ್ಥಿಸುತ್ತಿದ್ದಾರೆ.
ಆರ್ಸಿಬಿಗೆ ಪ್ಲೇಆಫ್ಗೆ ಅರ್ಹತೆ ಪಡೆಯಲು ಇಂದಿನ ಗೆಲುವು ಅತ್ಯಗತ್ಯ. ಆದ್ದರಿಂದಲೇ ಇಂದು ಯಾವುದೇ ಕಾರಣಕ್ಕೂ ಮಳೆ ಬಾರದಂತೆ ಬೇಡಿಕೊಳ್ಳುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಆರ್ಸಿಬಿ ಗುಜರಾತ್ ತಂಡದ ವಿರುದ್ಧ ಆಡಿತ್ತು. ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಆರ್ಸಿಬಿ ಇಂದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.