ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧಿಸುವ ಸಾಧ್ಯತೆ ಇದ್ದು. ಸಂಸದ ಪ್ರತಾಪ್ ಸಿಂಹ ಅವರ ಬದಲಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಅಖಾಡಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.
ಮೈಸೂರು ಮಹಾರಾಜರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ ಎಂಬ ಸುದ್ದಿಯ ನಡುವೆಯೇ ಯದುವೀರ್ ಚುನಾವಣಾ ರಾಜಕೀಯಕ್ಕೆ ಬರಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ ಬಳಿಕ ರಾಜಮಾತೆ ಪ್ರಮೋದಾದೇವಿ ಇದೀಗ ಮಹತ್ವದ ಸೂಚನೆ ನೀಡಿದ್ದಾರೆ.
ಕಾಶಿಯಿಂದ ಬಂದ ರಾಜಮಾತೆ ಪ್ರಮೋದಾದೇವಿಯವರು ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ. ವರದಿಗಳ ಪ್ರಕಾರ, ಸಭೆಯ ನಂತರ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚುನಾವಣೆಯಲ್ಲಿ ಭಾಗವಹಿಸಲು ಆದೇಶಿಸಿದ್ದಾರೆ ಎನ್ನಲಾಗಿದೆ.