ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕಳೆದ ವರ್ಷ ರಾಜಕೀಯದಿಂದ ದೂರ ಇರುತ್ತೇನೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಘೋಷಿಸಿದ್ದರು.
ಆದರೆ ಇದೀಗ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡುತ್ತೇನೆ ಎಂದು ರಜನಿಕಾಂತ್ ಹೇಳಿದ್ದು, ಅಭಿಮಾನಿಗಳಿಗೆ ಕೊಂಚ ಸಮಾಧಾನ ಆಗಿದೆ.
ಆರೋಗ್ಯದ ಕಾರಣದಿಂದ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸುತ್ತೇನೆ ಎಂದು ರಜನಿಕಾಂತ್ ಹೇಳಿದ್ದರು. ಇದಾದ ಆರು ತಿಂಗಳ ನಂತರ ಇದೀಗ ರಾಜಕೀಯಕ್ಕೆ ಬರುವ ಬಗ್ಗೆ ಮತ್ತೆ ಮಾತನಾಡಿದ್ದು, ಮಕ್ಕಲ್ ಮಂದಿರಂ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.