ರಾಜ್ಯಸಭೆಗೆ ರಾಜರ್ಷಿ: ಡಾ. ವೀರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನೂತನವಾಗಿ ಭಾರತದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವಿರೇಂದ್ರ ಹೆಗ್ಗಡೆಯವರು ರಾಜ್ಯಸಭೆಯಲ್ಲಿಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಡಾ. ವಿರೇಂದ್ರ ಹೆಗ್ಗಡೆ ಹಾಗೂ ಇಳೆಯರಾಜಾ ಮತ್ತು ಪಿಟಿ ಉಷಾ ಅವರನ್ನು ರಾಜ್ಯಸಬೆಗೆ ನಾಮನಿರ್ದೇಶನಗೊಳಿಸಲಾಗಿತ್ತು. ಕರಾವಳಿ ಕರ್ನಾಟಕದ ಭಾಗದಿಂದ ಪ್ರಸ್ತುತ ರಾಜ್ಯಸಭೆಗೆ ಆಯ್ಕೆಯಾಗಿರುವ ಶ್ರೀಯುತರು ಇಂದು ರಾಜ್ಯಸಭೆಯ ಸ್ಪೀಕರ್‌ ಆಗಿರುವ ವೆಂಕಯ್ಯನಾಯ್ಡು ಅವರ ಸಮ್ಮುಖದಲ್ಲಿ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕನ್ನಡದಲ್ಲೇ ಪ್ರಮಾಣವಚನವನ್ನು ಹೇಳಿದ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಆ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತ ಅಪಾರ ಗೌರವಗಳಿಸಿರುವ ರಾಜರ್ಷಿಯೊಬ್ಬರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿರುವುದು ರಾಜ್ಯ ಹಾಗೂ ಜನತೆಗೆ ಹೆಮ್ಮೆ ಪಡುವ ಸಂಗತಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!