ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಹಲವು ದಿನಗಳಿಂದ ಭಾರೀ ಗೊಂದಲ ಮೂಡಿಸಿದ್ದ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರೇಸ್ನಿಂದ ಹೊರನಡೆದಿದ್ದು, ಈ ಮೂಲಕ ಹಿರಿಯ ನಾಯಕರಾದ ತರೂರ್ -ದಿಗ್ವಿಜಯ ಮಧ್ಯೆ ಅಧ್ಯಕ್ಷ ಸ್ಥಾನಕ್ಕಾಗಿ ಪೈಟ್ ನಡೆಯಲಿದೆ.
ರಾಜಸ್ಥಾನ ಮುಖ್ಯಮಂತ್ರಿಯಾಗಿರುವ ಅಶೋಕ್ ಗೆಹ್ಲೋಟ್ರನ್ನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ಅವರೇ ಸೂಚಿಸಿದ್ದರು. ಬಳಿಕ ನಡೆದ ಹೈಡ್ರಾಮಾದಿಂದ ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಇದೀಗ ಗೆಹ್ಲೋಟ್ ಅವರೇ ಅಧಿಕೃತವಾಗಿ ತಾವು ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.