ವಿಧಾನಸಭೆಯಲ್ಲಿ ಕಳೆದ ವರ್ಷದ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಮುಖ್ಯಮಂತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 2023-24ರ ಬಜೆಟ್‌ ಅನ್ನು ಇಂದು ಮಂಡಿಸಬೇಕಿತ್ತು. ಆದರೆ ವಿಧಾನಸಭೆಯಲ್ಲಿ ಹಿಂದಿನ ಬಜೆಟ್‌ ಅನ್ನು ಓದಿ ನಗೆಪಾಟಲಿಗೀಡಾಗಿದ್ದಾರೆ.

ತಕ್ಷಣವೇ ಸಚಿವ ಮಹೇಶ್ ಜೋಶಿ ಗೆಹ್ಲೋಟ್​ರನ್ನು ಮಧ್ಯದಲ್ಲೇ ತಡೆದರು, ಇದರಿಂದ ಸನದಲ್ಲಿ ಭಾರಿ ಕೋಲಾಹಲ ಉಂಟಾಯಿತು ಮತ್ತು ಮಂಡನೆಯನ್ನು ಮುಂದೂಡಬೇಕೆಂದು ಒತ್ತಾಯಿಸಿತು.

ಗೆಹ್ಲೋಟ್‌ ಅವರು ಆರಂಭದಲ್ಲಿ ಸುಮಾರು 7 ನಿಮಿಷಗಳ ಕಾಲ ಬಜೆಟ್‌ ಓದಿದರು, ಆಗ ಹಿಂದೆ ಕುಳಿತಿದ್ದ ಸಚಿವರು ಅವರ ಹಿಂದೆ ಬಂದು ಕಿವಿಯಲ್ಲಿ ಬಜೆಟ್​ ಮಂಡನೆ ನಿಲ್ಲಿಸುವಂತೆ ಹೇಳಿದರು. ತದನಂತರ ಸಿಎಂ ದಿನಾಂಕವನ್ನು ಗಮನಿಸಿ ತಬ್ಬಿಬ್ಬಾಗಿದ್ದಾರೆ. ನಂತರ ಅವರೇ ನಗಲು ಪ್ರಾರಂಭಿಸಿದರು. ಬಜೆಟ್​ ಸೋರಿಕೆಯಾಗಿದೆ ಎಂದು ಈಗಾಗಲೇ ದಾಳಿ ನಡೆಸುತ್ತಿರುವ ಬಿಜೆಪಿ ಗದ್ದಲವನ್ನು ತೀವ್ರಗೊಳಿಸಿದರು. ಹಲವು ಬಾರಿ ಮನವಿ ಮಾಡಿದರೂ ಗದ್ದಲ ನಿಲ್ಲದ ಕಾರಣ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!