ಪೇಪರ್ ಲೀಕ್, ಮನಿ ಲಾಂಡರಿಂಗ್ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥನ ಪುತ್ರರಿಗೆ ಇಡಿ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪರೀಕ್ಷಾ ಪ್ರಶ್ನೆ ಪತ್ರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಪುತ್ರರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷದ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಾಸ್ರಾ ಅವರ ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಸಮನ್ಸ್ ಜಾರಿ ಮಾಡಿದೆ.

ಹಲವರ ವಿರುದ್ಧ ರಾಜಸ್ಥಾನ ಪೊಲೀಸರು ದಾಖಲಿಸಿರುವ ಪ್ರಥಮ ಮಾಹಿತಿ ವರದಿಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣ ಹೊರಬಿದ್ದಿದೆ. ಇಡಿ ಕ್ರಮವು ಈ ತಿಂಗಳಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ವಿವಾದ ಸೃಷ್ಟಿಸುವ ಸಾಧ್ಯತೆ ಇದೆ.

ಒಂದೆಡೆ ರಾಜಸ್ಥಾನ ವಿಧಾನಸಭಾ ಚುನಾವಣಾ ಬೆನ್ನಲ್ಲೇ ಕೇಂದ್ರ ತನಿಖಾ ಸಂಸ್ಥೆ ಇಡಿ ಕಾಂಗ್ರೆಸ್ ನಾಯಕರ ಮೇಲಿನ ಅಕ್ರಮ ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಿದೆ. ಪ್ರತಿಪಕ್ಷಗಳನ್ನು ಗುರಿಯಾಗಿಸಲು ಮೋದಿ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!