‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ರಾಜೇಂದ್ರ ಸಿಂಗ್ ಬಾಬು ಬಳಿ ಇಲ್ಲವಂತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ತಮ್ಮ ಬಳಿ ಇದೆ ಎಂದು ಹೇಳಿದ್ದ ಕನ್ನಡ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಅದನ್ನು ಯಾರೂ ಬಳಸಬಾರದು ಎಂದು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಕಳುಹಿಸಿದ್ದರು.

ಆದರೆ ಈ ಟೈಟಲ್ ರಾಜೇಂದ್ರ ಸಿಂಗ್ ಬಾಬು ಅವರ ಬಳಿಯೇ ಇಲ್ಲವೆಂದು ಇದೀಗ ಗೊತ್ತಾಗಿದೆ.

ಹೌದು, ನಿರ್ಮಾಪಕ ಬಿ.ಕೆ. ಗಂಗಾಧರ್ ಅವರ ಬಳಿ ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ಇದ್ದು, ಈಗಾಗಲೇ ರಮ್ಯಾ ಅವರು ಗಂಗಾಧರ್ ಅವರಿಂದ ಪತ್ರದ ಮೂಲಕ ಟೈಟಲ್ ಅನ್ನು ತಮಗೆ ವರ್ಗಾಯಿಸಿಕೊಂಡಿದ್ದಾರಂತೆ. ಈ ಕುರಿತು ಗಂಗಾಧರ ಅವರು ಕೊಟ್ಟ ಪತ್ರವನ್ನು ವಾಣಿಜ್ಯ ಮಂಡಳಿಗೆ ಸಲ್ಲಿಸಿದರೆ, ಟೈಟಲ್ ರಮ್ಯಾ ಅವರ ಪಾಲಾಗಲಿದೆ. ಹಾಗಾಗಿ ಈ ಶೀರ್ಷಿಕೆಗೂ ಮತ್ತು ರಾಜೇಂದ್ರ ಸಿಂಗ್ ಬಾಬು ಅವರಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ವತಃ ವಾಣಿಜ್ಯ ಮಂಡಳಿಯೇ ಹೇಳಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!